ಚಿತಾಗಾರದ ಕಾರ್ಮಿಕರಿಗೆ ನೆರವಿನ ಹಸ್ತ ನೀಡಿದ ತುಪ್ಪದ ಬೆಡಗಿ...!
ರುದ್ರಭೂಮಿಯ ಕೆಲಸಗಾರರಿಗೆ, ನಿರಾಶ್ರಿತರಿಗೆ ಹಾಗೂ ಬಂದೋಬಸ್ತ್ ನಲ್ಲಿದ್ದ ಪೊಲೀಸರಿಗೆ ದಿನಸಿ ಕಿಟ್ ನೀಡಿದ್ದಾರೆ ನಟಿ ರಾಗಿಣಿ ದ್ವಿವೇದಿ.

ನಮಗೆಲ್ಲ ತಿಳಿದಿರುವ ಹಾಗೆ ಕೊರೋನಾದಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದೆ. ಬಡ ಮತ್ತು ಮಾಧ್ಯಮ ವರ್ಗದ ಕುಟುಂಬಗಳು ಬೀದಿಗೆ ಬರುವಂತಹ ಸಂಕಷ್ಟ ಎದುರಾಗಿದೆ. ಇದರ ಜೊತೆಗೆ ಕೊರೋನಾ ಉಲ್ಬಣಕ್ಕೆ ತುತ್ತಾಗಿರುವ ರೋಗಿಗಳ ಚಿಕಿತ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಈ ವರ್ಗದ ಜನರು ನೇರವಾಗಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರಕ್ಕಾಗಿ ಸಾಲುಗಟ್ಟಿ ನಿಲ್ಲುವಂತಾಗಿದೆ. ಈ ಎಲ್ಲಾ ವಿದ್ಯಮಾನಗಳು ಸಾರ್ವಜನಿಕರಲ್ಲಿ ಮಾನಸಿಕವಾಗಿ ದುರ್ಬಲಗೊಳಿಸುತ್ತಿದೆ. ನಮ್ಮನ್ನಾಳುವ ಸರ್ಕಾರಗಳು ನಿಜಕ್ಕೂ ಜನರಲ್ಲಿ ಆತ್ಮ ಸ್ತಯ್ರ್ಯ ತುಂಬುವ ಅನಿವಾರ್ಯ ತುರ್ತಾಗಿದೆ.
ಈ ಸಂದಿಗ್ದ ಪರಿಸ್ಥಿತಿಯಲ್ಲಿ ಅನೇಕ ಸಿನಿಮಾ,ಕ್ರಿಕೆಟ್,ರಾಜಕೀಯ ತಾರೆಗಳು ಸೇರಿದಂತೆ ಸಾಮಾಜಿಕ ಸಂಘಟನೆಗಳು ತಮ್ಮ ಕೈಲಾದಷ್ಟು ನೆರವಿನ ಹಸ್ತ ನೀಡುವುದರ ಮೂಲಕ ಬಡತನದ ಹಸಿವಿಗೆ ಮಿಡಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟಿ ರಾಗಿಣಿ ದ್ವಿವೇದಿ ಬಂದೋಬಸ್ತ್ನಲ್ಲಿದ್ದ ಪೊಲೀಸರಿಗೆ ಆಹಾರದ ಪೊಟ್ಟಣಗಳನ್ನು ನೀಡಿದ್ದರು. ಇದೀಗ ಚಿತಾಗಾರ ಹಾಗೂ ರುದ್ರಭೂಮಿಯ ಕೆಲಸಗಾರರಿಗೆ ದಿನಸಿ ಕಿಟ್ ಹಂಚುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.