17ಜನರ ಉದ್ಯೋಗ ಕಿತ್ತುಕೊಂಡ ಎಳೆ ಸಂಸದನಿಗೆ ಪಶ್ಚಾತಾಪ ಇಲ್ಲವೇ?

ಈ ಜೀವ ವಿರೋಧಿ ದಂಧೆಯಲ್ಲಿ ಸತೀಶ್ ರೆಡ್ಡಿಯೇ ಕಿಂಗ್ ಪಿನ್: ಕೆಪಿಸಿಸಿ ಟ್ವೀಟ್

 | 
tejaswi surya

ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಟ್ವೀಟ್ ಮೂಲಕ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಸತೀಶ್ ರೆಡ್ಡಿ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಕೊರೋನಾ ಸಂದರ್ಭದಲ್ಲಿ ತಮ್ಮ ಹಗರಣವನ್ನು ಮುಚ್ಚಿಕೊಳ್ಳುಲು ಅಮಾಯಕ ವಾರ್ ರೂಂ ಸಿಬ್ಬಂದಿಗಳ ಹೆಸರನ್ನು ಬಳಸಿ ಕೋಮು ಬಣ್ಣ ನೀಡಿಲು ಮುಂದಾದ ತೇಜಸ್ವಿ ಸೂರ್ಯ ಈಗ ಎಲ್ಲಿ ಅಡಗಿದ್ದಾರೆ ಎಂದು ಪ್ರಶ್ನಿಸಿದೆ.

ಬಿಬಿಎಂಪಿ ವಾರ್ ರೂಂಗೆ 17 ಸಿಬ್ಬಂದಿಗಳ ಉದ್ಯೋಗ, ಆತ್ಮಗೌರವ, ಮರ್ಯಾದೆಯನ್ನು ಕಿತ್ತುಕೊಂಡ ಎಳೆ ಸಂಸದನಿಗೆ ಪಶ್ಚಾತಾಪ ಇಲ್ಲವೇ? ಅವರಿಗಾದ ನಷ್ಟಕ್ಕೆ ಪರಿಹಾರ ದೊರಕಿಸಿಕೊಡುವ ಕೆಲಸ ಮಾಡುವರಾ ಈಗ? ಎಂದು ಸಂಸದ ತೇಜಸ್ವಿ ಸೂರ್ಯನನ್ನು ಟ್ವಿಟ್ಟರ್ ಮೂಲಕ ಪ್ರಶ್ನಿಸಲಾಗಿದೆ.

ಹಾಗೆ, ಬೆಡ್ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತ, ಶಾಸಕ ಸತೀಶ್ ರೆಡ್ಡಿ ಆಪ್ತನ ಬಂಧನವಾಗಿದೆ, ಸಣ್ಣ ಮಿಕಗಳನ್ನು ಹಿಡಿದು ದೊಡ್ಡ ಮಿಕಗಳನ್ನು ಬಚಾವ್ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದು, ಈ ಜೀವ ವಿರೋಧಿ ದಂಧೆಯಲ್ಲಿ ಸತೀಶ್ ರೆಡ್ಡಿಯೇ ಕಿಂಗ್ ಪಿನ್, ಸಂಸದ ತೇಜಸ್ವಿ ಸೂರ್ಯನೂ ಇದರಲ್ಲಿ ಪ್ರಮುಖ ಪಾತ್ರಧಾರಿಗಳು. ಇವರೆಲ್ಲರ ಬಂಧನವಾಗಿ, ಸಮಗ್ರ ತನಿಖೆಯಾಗಬೇಕು ಎಂದು ಟ್ವಿಟ್ಟರ್ ಮುಲಕ ಹೇಳಲಾಗಿದೆ.

ಕೇವಲ ಬೆಡ್ ಬ್ಲಾಕಿಂಗ್ ಒಂದೇ ಅಲ್ಲ, ಆಕ್ಸಿಜನ್ ಬ್ಲಾಕಿಂಗ್, ವ್ಯಾಕ್ಸಿನ್ ಬ್ಲಾಕಿಂಗ್, ರೆಮಿಡಿಸಿವಿರ್ ಬ್ಲಾಕಿಂಗ್‌ನ್ನೂ ಬಿಜೆಪಿ ನಡೆಸಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಲಸಿಕೆ ನೀಡುವಿಕೆಯಲ್ಲಿ ಖಾಸಗಿ ಆಸ್ಪತ್ರೆಯೊಂದಿಗೆ ಸೇರಿದ ತೇಜಸ್ವಿ ಸೂರ್ಯ ವ್ಯಾಕ್ಸಿನ್ ಬ್ಲಾಕಿಂಗ್ ದಂಧೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.